ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ ಸರ್ಕಾರ ಇದನ್ನು 2200ರಿಂದ 2500ರವರೆಗೆ ಏರಿಕೆ ಮಾಡಲು ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಯಡಿಯೂರಪ್ಪನವರು ಈಗಾಗಲೇ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ವೆಚ್ಚ ಏರಿಕೆ ಮಾಡುವ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ/ ವರ್ಗ , ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ನಿಲಯಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ಈ ಹಿಂದೆ ಬಿಜೆಪಿಯೇ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಶೌಚಾಲಯ, ವಿದ್ಯಾರ್ಥಿಗಳ ಕೊಠಡಿ, ಹಾಸಿಗೆ, ದಿಂಬು,ಊಟದ ತಟ್ಟೆ, ಅಡುಗೆ ಮನೆ ಸೇರಿದಂತೆ ವಿದ್ಯಾರ್ಥಿ ನಿಲಯಗಳಲ್ಲಿ ಕನಿಷ್ಠ ಸೌಲಭ್ಯಗಳು ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದಾರೆ. ಜೊತೆಗೆ ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ ನೀಡುತ್ತಿರುವ ಹಣ ಯಾವುದಕ್ಕೂ ಸಾಲದು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಾರ್ಷಿಕ ವೆಚ್ಚವನ್ನು ಏರಿಕೆ ಮಾಡುವುದು ಹಾಗೂ ವಿದ್ಯಾರ್ಥಿ ನಿಲಯಗಳ ಉನ್ನತೀಕರಣಕ್ಕೂ ಗಮನಹರಿಸಿದೆ. 2018-19ರ ಅವಧಿಯಲ್ಲಿ 250 ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ 1,88,500 ವಿದ್ಯಾರ್ಥಿಗಳಿಗೆ ಹೊಂದಾಣಿಕೆ ಮಾಡುವುದೇ ಅಧಿಕಾರಿಗಳಿಗೆ ಸಮಸ್ಯೆಯಾಗಿತ್ತು.
ಕನಿಷ್ಟ ಪಕ್ಷ ಇನ್ನು 250 ಕೋಟಿ ಅನುದಾನ ನೀಡಬೇಕೆಂದು ಇಲಾಖೆ ಅಧಿಕಾರಿಗಳೇ ಮನವಿ ಮಾಡಿದ್ದರು. ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರುವುದರಿಂದ ಹಾಸ್ಟೆಲ್ಗಳ ಉನ್ನತೀಕರಣ, ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದು, ಸುರಕ್ಷತೆ, ಹಾಸ್ಟೆಲ್ಗಳಲ್ಲಿ ಅನಗತ್ಯವಾಗಿ ಬೀಡುಬಿಟ್ಟಿರುವ ವಿದ್ಯಾರ್ಥಿಗಳಲ್ಲದವರನ್ನು ಖಾಲಿ ಮಾಡಿಸುವುದು, ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಶೀಘ್ರ ಆದೇಶವನ್ನು ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ. ವೆಚ್ಚ ಹೆಚ್ಚಳ ಮಾಡುವುದರಿಂದ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ವೆಚ್ಚವಾಗಬಹುದು. ಆದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ತುರ್ತಾಗಿ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…