ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಇನ್ನು ಅಗ್ನಿ ಅವಘಡ ಸಂದರ್ಭದಲ್ಲಿ ಹಲವು ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಮೇಲಿಂದಲೇ ಕೆಳಗೆ ಧುಮುಕಿದ್ದಾರೆ. ಈ ವೇಳೆ ಕೆಳಗಡೆ ನಿಂತಿದ್ದ ಜನಸ್ತೋಮ ಅವರನ್ನು ಹೆಚ್ಚಿನ ಅಪಾಯವಾಗದಂತೆ ರಕ್ಷಿಸಿದೆ. ಆದರೂ ಕೆಳಗೆ ಬಿದ್ದವರ ಪೈಕಿ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಗಳು ಕೆಳಗೆ ಹಾರುತ್ತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ

.
ಘಟನಾ ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ಆಗಮಿಸಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅಂತೆಯೇ ಕಟ್ಟಡದಲ್ಲಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಅಲ್ಲದೆ ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕಟ್ಟಡದ ಮಾಲೀಕ ಪರಾರಿ
ಇನ್ನು ಕಟ್ಟಡದ ಅಗ್ನಿ ಅವಘಡ ವಿಚಾರಕ್ಕೆ ಸಂಬಂಧಿಸಿದಂತೆ ಸೂರತ್ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಟ್ಟಡದಲ್ಲಿ ಯಾವುದೇ ರೀತಿಯ ಬೆಂಕಿ ನಿಯಂತ್ರಣ ವ್ಯವಸ್ಥೆ ಇರಲಿಲ್ಲ ಮತ್ತು ಅಗ್ನಿ ಅವಘಡದಂತಹ ಸಂದರ್ಭದಲ್ಲಿ ತುರ್ತಾಗಿ ಪರಾರಿಯಾಗಲು ಯಾವುದೇ ಪರ್ಯಾಯ ಮಾರ್ಗ ಕೂಡ ಇರಲಿಲ್ಲ. ಹೀಗಾಗಿ ಕಟ್ಟಡದ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಕಟ್ಟಡದ ಮಾಲೀಕ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.