News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

368

ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ವೃಷಭ:-

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್‌ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಕಟಕ :-

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ಕನ್ಯಾ :-

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ತುಲಾ:

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವೃಶ್ಚಿಕ :-

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಕುಂಭ:-

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…