News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

367

ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ವೃಷಭ:-

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್‌ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಕಟಕ :-

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ಕನ್ಯಾ :-

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ತುಲಾ:

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವೃಶ್ಚಿಕ :-

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಕುಂಭ:-

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading