ಸುದ್ದಿ

ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

46

ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.

ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ಗ್ಯಾಜೆಟ್

    ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

    ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.