ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….