ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.
ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…
ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಮೂಲ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…