ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…