ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….