ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…