ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…