ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–
ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.
ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.
ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.
ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.
ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…