ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

3999

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ