ಉಪಯುಕ್ತ ಮಾಹಿತಿ

ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3500

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?

ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.

ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.

ಕ್ರಮೇಣ  ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.

ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.

ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

ಬನ್ನಿ, ಈ ನಿಟ್ಟಿನಲ್ಲಿ ಅತ್ಯಂತ ಸಮರ್ಥವಾದಮನೆಮದ್ದು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ:-

ಅಗತ್ಯವಿರುವ ಸಾಮಾಗ್ರಿಗಳು:-

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ

* ಲಿಂಬೆ ರಸ – ಒಂದು ದೊಡ್ಡ ಚಮಚ

* ಉಪ್ಪು- ಎರಡು ಚಿಕ್ಕ ಚಮಚ

ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.

ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

ತಯಾರಿಕಾ ವಿಧಾನ:-

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.

* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.

* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್‌ನಿಂದ ಒರೆಸಿಕೊಳ್ಳಿ.

* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.

* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.

* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.

* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.

* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.

* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…