ಉಪಯುಕ್ತ ಮಾಹಿತಿ

ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3486

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?

ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.

ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.

ಕ್ರಮೇಣ  ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.

ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.

ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

ಬನ್ನಿ, ಈ ನಿಟ್ಟಿನಲ್ಲಿ ಅತ್ಯಂತ ಸಮರ್ಥವಾದಮನೆಮದ್ದು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ:-

ಅಗತ್ಯವಿರುವ ಸಾಮಾಗ್ರಿಗಳು:-

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ

* ಲಿಂಬೆ ರಸ – ಒಂದು ದೊಡ್ಡ ಚಮಚ

* ಉಪ್ಪು- ಎರಡು ಚಿಕ್ಕ ಚಮಚ

ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.

ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

ತಯಾರಿಕಾ ವಿಧಾನ:-

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.

* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.

* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್‌ನಿಂದ ಒರೆಸಿಕೊಳ್ಳಿ.

* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.

* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.

* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.

* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.

* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.

* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.