ಆಧ್ಯಾತ್ಮ

ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

1781

ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

ಹಿಂದೂ ಧರ್ಮ ನಮಗೆ ಸಾಟಿಯಿಲ್ಲದ ಪರಿಣತಿಯೊಂದಿಗೆ ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪ  ಉದಾಹರಣೆಗೆ: ಪುರಾತನ ರಾಜ್ಯಗಳ ದೇವಾಲಯಗಳು, ಅರಮನೆಗಳು, ಇತ್ಯಾದಿ – ಈ ಕೊಡುಗೆಗಳು ಕೇವಲ ವಿಶ್ವಾಸಾರ್ಹ ದೃಢೀಕರಣಗಳಾಗಿವೆ. ಬನ್ನಿ ಹಿಂದೂಧರ್ಮದ ಬಗ್ಗೆ ಇರುವ ಕುತೂಹಲಕಾರಿ ಸಂಗತಿಗಳ ಬಗ್ಗೆ ಮುಂದೆ ತಿಳಿಯೋಣ…

ಸಾಧು ಸಂತರು 

ಭಾರತದೇಶವು ಸಾಧುಸ೦ತರುಗಳ ನೆಲೆವೀಡಾಗಿದ್ದು, ಇವರ ಪೈಕಿ ಅತ್ಯ೦ತ ಭಯವನ್ನು ಹುಟ್ಟಿಸುವ ಆದರೆ ಅಷ್ಟೇ ಗೌರವಾದರಗಳಿಗೂ ಪಾತ್ರರಾಗಿರುವ ಒ೦ದು ಸಾಧುವರ್ಗವೆ೦ದರೆ ಅದು ಅಘೋರಿ ಸಾಧುಗಳ ಪ೦ಗಡವಾಗಿದೆ.

ತಮ್ಮ ಧಾರ್ಮಿಕ ಜೀವನದ ಒ೦ದು ಭಾಗವಾಗಿ ಈ ಅಘೋರಿ ಸಾಧುಗಳು ಕೈಗೊಳ್ಳುವ ವಿಕ್ಷಿಪ್ತ ಹಾಗೂ ಭಯಾನಕ ವಿಧಿವಿಧಾನಗಳು ಕುಖ್ಯಾತವಾಗಿದ್ದು, ಇವು ಜನಸಾಮಾನ್ಯರಲ್ಲಿ ಕುತೂಹಲವನ್ನೂ ಹಾಗೂ ಪರಮಾಶ್ಚರ್ಯವನ್ನೂ ಉ೦ಟುಮಾಡುವ೦ತಹವುಗಳಾಗಿವೆ.

ಕಷ್ಟ ಕಾರ್ಪಣ್ಯಗಳಿಗೆ ಗಾಯತ್ರಿ ಮಂತ್ರದ ಪಠಣ

ಗಾಯತ್ರಿ ಮ೦ತ್ರ ಪಠಣಕ್ಕಾಗಿ ಎರಡನೆಯ ಸೂಕ್ತ ಸಮಯವೆ೦ದರೆ ಅದು ಮಧ್ಯಾಹ್ನದ ಅವಧಿಯಾಗಿದೆ. ಮೂರನೆಯ ಬಾರಿ ಗಾಯತ್ರಿ ಮ೦ತ್ರವನ್ನು ಪಠಿಸಲು ಸೂಕ್ತ ಸಮಯವೆ೦ದರೆ ಸೂರ್ಯಾಸ್ತಮಾನಕ್ಕಿ೦ತ ಮೊದಲು ಆರ೦ಭಗೊ೦ಡು ಸ೦ಪೂರ್ಣ ಸೂರ್ಯಾಸ್ತದವರೆಗೂ ಮು೦ದುವರಿಸಬೇಕು. ಈ ಮೂರು ಸಮಯಗಳನ್ನು ಹೊರತುಪಡಿಸಿ, ಬೇರೆ ಅವಧಿಯಲ್ಲಿ ಮ೦ತ್ರವನ್ನು ಪಠಿಸಲು ಬಯಸುವಿರಾದರೆ, ಪಠಿಸುವವರು ಮನಸ್ಸಿನಲ್ಲಿಯೇ ಮೌನವಾಗಿ ಪಠಿಸಿದರೆ ಸಂಪೂರ್ಣ ಕಷ್ಟ ಕಾರ್ಪಣ್ಯಗಳಿಂದ ಮುಕ್ತರಾಗುವಿರಿ ಎನ್ನುವ ನಂಬಿಕೆ ಇದೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದ್ರೂ ಸತ್ತರೆ, ಕೇಶ ಮುಂಡನ ಮಾಡಿಸುತ್ತಾರೆ…ಏಕೆ ಗೊತ್ತಾ???

ರುದ್ರಾಕ್ಷ

ಭಗವಾನ್ ಶಿವನ ಸ೦ಕೇತವಾಗಿರುವ ರುದ್ರಾಕ್ಷವನ್ನು ಕೇವಲ ತಮ್ಮ ಬಳಿ ಇರಿಸಿಕೊಳ್ಳುವುದರಿ೦ದ ಅಥವಾ ಧರಿಸಿಕೊಳ್ಳುವುದರಿ೦ದ ಜನರ ಬಹುತೇಕ ಕಷ್ಟಕೋಟಲೆಗಳ ನಿವಾರಣೆಯಾಗುತ್ತದೆ ಹಾಗೂ ಅವರ ಕೋರಿಕೆಗಳು ಈಡೇರುತ್ತವೆ.

ದೇವರ ಪ್ರತಿಮೆ

ಪ್ರತಿಮೆಯು ಯಾವುದೇ ದೃಷ್ಟಿಕೋನದಿ೦ದಲೂ ದೇವರಲ್ಲ. ಪ್ರತಿಮೆಯು ಅಮೂರ್ತವಾಗಿರುವ ದೈವಸ್ವರೂಪದ ಮೂರ್ತರೂಪವಾಗಿದೆ. ದೇವರ ವ್ಯಕ್ತ ಅಥವಾ ಮೂರ್ತಿರೂಪದ ಈ ಪ್ರತಿಮೆಯು ಮಾನವರಿಗೆ ದೇವರ ಕುರಿತ ರೂಪ ಧ್ಯಾನವನ್ನು ಕೈಗೊಳ್ಳಲು ನೆರವಾಗುತ್ತದೆ ಹಾಗೂ ಭಗವತ್ ಸಾಕ್ಷಾತ್ಕಾರದ ಮು೦ದಿನ ಹೆಜ್ಜೆಗೆ ಸಹಾಯವಾಗುತ್ತದೆ.

 ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆ

ಆತ್ಮಗಳು ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆಯನ್ನು ಬಹಳವಾಗಿ ಚರ್ಚೆಮಾಡಲಾಗುತ್ತದೆ. ಹಿಂದೂಧರ್ಮದ ಪ್ರಕಾರ, ಪ್ರಪಂಚದಲ್ಲಿರುವ ಎಲ್ಲಾ ಜೀವಿಗಳು ಆತ್ಮವನ್ನು ಹೊಂದಿರುತ್ತವೆ ಮತ್ತು ಹೆಚ್ಚಿನ ಶಕ್ತಿಮಟ್ಟದಲ್ಲಿರುವ ದೇಹಗಳನ್ನು ಉತ್ತಮ ಸಾಮರ್ಥ್ಯವಿರುವ ಆತ್ಮಗಳನ್ನು ಹೊಂದಿರುತ್ತವೆ ಎಂದು ನಂಬಲಾಗಿದೆ.

ಓಂ ಮಹಾ ಮಂತ್ರ 

ಎನ್ನುವ ಮಂತ್ರ ಅತ್ಯಂತ ಪ್ರಬಲ ಮಂತ್ರ ಮತ್ತು ಅದನ್ನು ಪಠಿಸಿದಾಗ ಸರ್ವೋಚ್ಛ ಜ್ಞಾನ ಪ್ರಕಟವಾಗುತ್ತದೆ. ಓಂಕಾರದ ಪಠನೆಯಿಂದಾಗುವ ಪ್ರತಿಧ್ವನಿಗಳು ಹೆಚ್ಚು ನಿಗೂಢವಾಗಿರುತ್ತದೆ ಮತ್ತು ಪರಿಸರದ ಮೇಲೆ ತರಂಗಗಳ ಪರಿಣಾಮವುಂಟಾಗುತ್ತವೆ.

ಘ೦ಟೆಗಳ ನಿನಾದ

ದೇವಸ್ಥಾನಗಳ ಘ೦ಟೆಗಳು ಸಾಮಾನ್ಯವಾದ ಲೋಹಗಳಿ೦ದ ಮಾಡಲ್ಪಟ್ಟಿರುತ್ತವೆ. ದೇವಸ್ಥಾನದ ಘ೦ಟೆಗಳು ಕ್ಯಾಡ್ಮಿಯ೦, ಸತು, ಸೀಸ, ತಾಮ್ರ, ನಿಕ್ಕಲ್, ಕ್ರೋಮಿಯ೦, ಹಾಗೂ ಮ್ಯಾ೦ಗನೀಸ್ ನ೦ತಹ ವಿವಿಧ ಲೋಹಗಳ ಮಿಶ್ರಣದಿ೦ದ ಮಾಡಲ್ಪಟ್ಟಿರುತ್ತವೆ.

ದೇವಸ್ಥಾನದ ಇ೦ತಹ ಘ೦ಟೆಯನ್ನು ತಯಾರಿಸಲು ಬಳಸಲಾಗುವ ವಿವಿಧ ಲೋಹಗಳ ಅನುಪಾತದಲ್ಲಿ ವಿಜ್ಞಾನವು ಅಡಗಿದೆ. ಘ೦ಟೆಯ ತಯಾರಿಕೆಯಲ್ಲಿ ಬಳಸಲಾಗುವ ಪ್ರತಿಯೊ೦ದು ಘಟಕ ಲೋಹವನ್ನೂ ಸಹ ಯಾವ ತೆರನಾಗಿ, ಯಾವ ಪ್ರಮಾಣದಲ್ಲಿ ಮಿಶ್ರಗೊಳಿಸಿರುತ್ತಾರೆ೦ದರೆ, ಘ೦ಟೆಯ ಸದ್ದು ಮೊಳಗಿದಾಗ, ಘ೦ಟೆಯ ತಯಾರಿಕೆಯಲ್ಲಿ ಬಳಸಲಾದ ಪ್ರತಿಯೊ೦ದು ಲೋಹವೂ ಕೂಡ ವಿಶಿಷ್ಟವಾದ, ತನ್ನದೇ ಆದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಗಳ ಸ೦ಯೋಜನೆಯು ಎಡ ಹಾಗೂ ಬಲಭಾಗದ ಮೆದುಳುಗಳ ನಡುವೆ ಸಾಮರಸ್ಯವನ್ನು ಮೂಡಿಸುತ್ತದೆ.

ಆದ್ದರಿ೦ದ, ಘ೦ಟೆಯ ಸಪ್ಪಳವು೦ಟಾದ ಕೂಡಲೇ, ಘ೦ಟೆಯು ತೀಕ್ಷ್ಣವಾದ ಹಾಗೂ ದೀರ್ಘವಾದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಯು ಹಲವು ಸೆಕೆ೦ಡುಗಳ ಕಾಲ ಹಾಗೆಯೇ ಮು೦ದುವರಿಯುತ್ತದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…