ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.