News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವ್ಯಕ್ತಿ ವಿಶೇಷಣ

ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

411

ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.

ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :

ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

ಪ್ರಶಸ್ತಿ ಸನ್ಮಾನಗಳು:-

  • ಕಿಟ್ಟೆಲರಿಗಿದ್ದ ಕನ್ನಡ – ಇಂಗ್ಲಿಷ್ ಜ್ಞಾನ,ಪಾಂಡಿತ್ಯವನ್ನು ಗಮನಿಸಿದ ಜರ್ಮನಿಯ ಟ್ಯುಬಿಂಗನ್ ವಿಶ್ವ ವಿದ್ಯಾನಿಲಯ, ಜೂನ್, ೬, ೧೮೯೬ ರಲ್ಲಿ ಅವರಿಗೆ ” ಡಾಕ್ಟರೇಟ್ ” ಕೊಟ್ಟು ಆದರಿಸಿತು.
  • ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಸಂಸ್ಥೆ ಯ ವತಿಯಿಂದ ಗೌರವ [೧೮೯೦] ಸದಸ್ಯತ್ವವನ್ನು ಕೊಡಲಾಯಿತು. ಕನ್ನಡ ಭಾಷೆಯನ್ನು ಬೆಳೆಸಲು ಒಬ್ಬ ವಿದೇಶಿ ಪಾದ್ರಿ ಮಾಡಿದ ಸಾಧನೆ, ಒಂದು ಅಪೂರ್ವ ಸಂಗತಿಯಾಗಿದೆ.

ಮರಣ ಶತಮಾನೋತ್ಸವ ಆಚರಣೆ:-

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…