ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್ ತಜ್ಞರ ಸಹಾಯದಿಂದ ಅಶ್ಲೀಲ ವೆಬ್ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್ ಟೀವಿ ಮೂಲಕ ಅಶ್ಲೀಲ ವೆಬ್ಸೈಟ್ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್ಸೈಟ್ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್ಲೋಡ್ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್ ಅವರು ಅಶ್ಲೀಲ ವೆಬ್ಸೈಟ್ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್ ಟೀವಿಯನ್ನು ಕಂಪ್ಯೂಟರ್ ರೀತಿ ಹ್ಯಾಕ್ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್ಲೈನ್ಗೆ ಅಪ್ಲೋಡ್ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್ ಅವರು ಸೈಬರ್ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.
ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್ಲೈನ್ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…