ಸುದ್ದಿ

ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

159

ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್‌ ತಜ್ಞರ ಸಹಾಯದಿಂದ ಅಶ್ಲೀಲ ವೆಬ್‌ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್‌ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್‌ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್‌ ಟೀವಿ ಮೂಲಕ ಅಶ್ಲೀಲ ವೆಬ್‌ಸೈಟ್‌ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್‌ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್‌ಸೈಟ್‌ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್‌ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್‌ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್‌ಲೋಡ್‌ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್‌ ಅವರು ಅಶ್ಲೀಲ ವೆಬ್‌ಸೈಟ್‌ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್‌ ಟೀವಿಯನ್ನು ಕಂಪ್ಯೂಟರ್‌ ರೀತಿ ಹ್ಯಾಕ್‌ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್‌ಲೈನ್‌ಗೆ ಅಪ್‌ಲೋಡ್‌ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್‌ ಅವರು ಸೈಬರ್‌ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.

ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್‌ಲೈನ್‌ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.