ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.
ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.
ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…