ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.
ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.
ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….