News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

733

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.