ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.
ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.
ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…