News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

736

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…