ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

717

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading