ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ಇರುವ ಹಿನ್ನಲೆಯಲ್ಲಿ ಉಗ್ರರು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಸೋಮವಾರ ರಾತ್ರಿ 8.30ರ ಸುಮಾರಿಗೆ ಅನಂತನಾಗ್ ಜಿಲ್ಲೆಯ ಖನಬಾಲ್ನದಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ 6 ಮಹಿಳೆಯರು ಸೇರಿದಂತೆ ಬಸ್ನಲಲ್ಲಿದ್ದ 7 ಮಂದಿ ಅಮರನಾಥ ಯಾತ್ರಿಕರು ಬಲಿಯಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿತ್ತು. ಭದ್ರತೆಗಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜತೆಗೆ 40 ಸಾವಿರ ಅರೆ ಮಿಲಿಟರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಅಲ್ಲದೆ, ಉಪಗ್ರಹ ವ್ಯವಸ್ಥೆ, ಡ್ರೋನ್ ಕಣ್ಗಾವಲು ಇಡಲಾಗಿತ್ತು. ಭಾರೀ ಭದ್ರತೆಯ ನಡುವೆಯೂ ಉಗ್ರರು ದಾಳಿ ನಡೆಸಿರುವುದು ಜನರಲ್ಲಿರುವ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಅಮರನಾಥ ಯಾತ್ರೆ ಮುಗಿಸಿ ಮರಳುತ್ತಿರುವಾಗ ಈ ಕೃತ್ಯ ನಡೆದಿದೆ. ಉಗ್ರರ ದಾಳಿಗೆ ತುತ್ತಾದ ಗುಜರಾತ್ ನೋಂದಣಿಯ ಬಸ್ ಅಮರನಾಥ ದೇಗುಲದ ಬೋರ್ಡ್ನೊಂ ದಿಗೆ ರಿಜಿಸ್ಟರ್ ಮಾಡಿಕೊಂಡಿರಲಿಲ್ಲ. ರಾತ್ರಿ 7ರ ನಂತರ ಭದ್ರತೆ ವಾಪಸ್ ಪಡೆದಿದ್ದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಅವಕಾಶ ಇರಲಿಲ್ಲ. ಆದರೂ ಬಸ್ ಡ್ರೈವರ್ ನಿಯಮ ಮೀರಿ ಬಸ್ ಚಲಾಯಿಸಿದ್ದ.
ಜಮ್ಮುವಿನಿಂದ ಅಮರನಾಥ ದೇಗುಲ 200 ಕಿಲೋ ಮೀಟರ್ ದೂರದಲ್ಲಿದೆ. ಅಮರನಾಥ ಯಾತ್ರೆಯ ದಾರಿಯಲ್ಲಿ 40 ಸಾವಿರ ಭದ್ರತಾ ಪಡೆಗಳನ್ನ ನಿಯೋಜಿಸಲಾಗಿತ್ತು. ಗುಪ್ತಚರ ಇಲಾಖೆಯ ಮಾಹಿತಿಯಂತೆ ಉಗ್ರರು ಸುಮಾರು 150 ಯಾತ್ರಿಕರು ಹಾಗೂ 200 ಪೊಲೀಸರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಇನ್ನು ಉಗ್ರರ ದಾಳಿ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಮುಂದೂಡಲಾಗಿದೆ ಎಂಬ ಗುಮಾನಿಗಳು ಕೇಳಿಬರತೊಡಗಿವೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಸರ್ಕಾರ ಮಾಹಿತಿಯನ್ನು ನೀಡಿಲ್ಲ. ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರಿಕರ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಿಎಂ ಮೆಹಬೂಬಾ ಮುಫ್ತಿ ಅನಂತ್ನಾ7ಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದು ಪ್ರತಿಯೊಬ್ಬ ಕಾಶ್ಮೀರಿ ತಲೆತಗ್ಗಿಸುವಂತ ಕೃತ್ಯ. ಇದು ಕೇವಲ ನಮ್ಮ ಅತಿಥಿಗಳ ಮೇಲೆ ನಡೆದ ಭಯಂಕರ ದಾಳಿಯಲ್ಲ. ಇಡೀ ಕಾಶ್ಮೀರ ಹಾಗೂ ಕಾಶ್ಮೀರಿಯತ್ ಮೇಲೆ ನಡೆದ ಲಜ್ಜೆಗೆಟ್ಟ ದಾಳಿ. ಉಗ್ರರನ್ನ ಶಿಕ್ಷಿಸದೇ ಬಿಡೋದಿಲ್ಲ ಅಂತಾ ಗುಡುಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಹೇಡಿಗಳ ಪೈಶಾಚಿಕ ಕೃತ್ಯಕ್ಕೆ ಭಾರತ ತಲೆಬಾಗೋದಿಲ್ಲ ಎಂದು ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.