ಸುದ್ದಿ

ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

76

ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.

ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.

ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?