ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.

ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…