News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

244

ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.

ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಆರೋಗ್ಯ

    ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

    ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…