ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…