ಆರೋಗ್ಯ

ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

161

ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.

ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?

1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್‍ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…