News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

“ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

455

ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.

ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.

ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.

ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.

ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.

ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು…. 

  • ಒಂದು ವೇಳೆ ಅನುಮಾನ ಬಂದರೆ  ಒಂದು ದೊಡ್ಡ ಚಮಚದಷ್ಟು ಅನುಮಾನವಿರುವ ಅಕ್ಕಿಯನ್ನು ತೆಗೆದುಕೊಂಡು ಬೆಂಕಿಕಡ್ಡಿ ಗೀರಿ ಬೆಂಕಿಯನ್ನು ನೇರವಾಗಿ ಅಕ್ಕಿಗೆ  ತಾಕುವಂತೆ ಮಾಡಿ.

  • ಒಂದು ವೇಳೆ ಪ್ಲಾಸ್ಟಿಕ್ ಸುಟ್ಟ ವಾಸನೆ ಬಂದರೆ ಇದರಲ್ಲಿ ಪ್ಲಾಸ್ಟಿಕ್ ಇದೆ ಎಂದು ಅರ್ಥ. ನಿಜವಾದ ಅಕ್ಕಿಯಾದರೆ ಜ್ವಾಲೆ ತಾಕಿದ ಭಾಗ ಸುಟ್ಟು ಬೇರೆಯೇ ವಾಸನೆ ಬರುತ್ತದೆ.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಕಾವಲಿಯ ಮೇಲೆ ಇರಿಸಿ ಒಣಗಿರುವಂತೆಯೇ ಹುರಿಯಿರಿ. ನಿಜವಾದ ಅಕ್ಕಿಯಾದರೆ ಬಾಣಲಿ ತಾಕಿದ ಭಾಗ ಕಂದು ಬಣ್ಣ ತಳೆಯುತ್ತದೆ.

 

  •  ಪ್ಲಾಸ್ಟಿಕ್ ಅಕ್ಕಿಯಾದರೆ ಅಕ್ಕಿ ಕಾವಲಿಗೆ ಅಂಟಿದ ಭಾಗ ಕರಗಿ ಚಿಕ್ಕ ವೃತ್ತಾಕಾರದ ಪದರ ರೂಪುಗೊಳ್ಳುತ್ತದೆ. ಈ ಅಕ್ಕಿಯನ್ನು ಸರ್ವಥಾ ಸೇವಿಸಕೂಡದು.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕಲಕಿ. ನಿಜವಾದ ಅಕ್ಕಿ ನೀರಿನಲ್ಲಿ ಮುಳುಗುತ್ತದೆ ಹಾಗೂ ಅಡ್ಡಲಾಗಿರುತ್ತದೆ. ಪ್ಲಾಸ್ಟಿಕ್ ಅಕ್ಕಿಯಾದರೆ ನೀರಿನಲ್ಲಿ ತೇಲುತ್ತದೆ.

  • ಒಂದು ವೇಳೆ ತೇಲದೇ ಇದ್ದರೂ ಅಕ್ಕಿಯಂತೆ ತಕ್ಷಣವೇ ಮುಳುಗದೇ ತಿರುಗುತ್ತಿರುವ ನೀರಿನಲ್ಲಿ ಕೊಂಚ ಹೊತ್ತು ತಿರುಗುತ್ತಲೇ ಇರುತ್ತದೆ ಹಾಗೂ ಇನ್ನೂ ಒಂದು ವೇಳೆ ಆಳಕ್ಕಿಳಿದರೂ ಅಕ್ಕಿಯಂತೆ ಅಡ್ಡಲಾಗಿರದೇ ನೇರವಾಗಿ ನಿಲ್ಲುತ್ತದೆ.
  • ಒಂದು ಮುಷ್ಟಿಯಷ್ಟು ಅಕ್ಕಿಯನ್ನು ಕುದಿನೀರಿನಲ್ಲಿ ಹಾಕಿ ಅನ್ನ ಮಾಡಿ. ಕೊಂಚ ಹೊತ್ತಿನ ಬಳಿಕ ಪಾತ್ರೆಯಲ್ಲಿರುವ ನೀರಿನ ಮೇಲ್ಪದರವನ್ನು ಗಮನಿಸಿ.
  • ಇಲ್ಲಿ ದಪ್ಪನೆಯ ಬಿಳಿಯಾದ ಪದರವೊಂದು ರೂಪುಗೊಳ್ಳುತ್ತಿರುತ್ತದೆ. ಇದು ಪ್ಲಾಸ್ಟಿಕ್ ಕರಗಿ ಗಾಳಿಗೆ ಗಟ್ಟಿಯಾದ ಪದರವಾಗಿದೆ.
  •  ಕೆಲವು ಪ್ಲಾಸ್ಟಿಕ್ ಅಕ್ಕಿ ಮೇಲಿನ ಯಾವುದೇ ವಿಧಾನಕ್ಕೆ ತನ್ನ ಗುಟ್ಟು ಬಿಟ್ಟುಕೊಡುವುದಿಲ್ಲ. ಇದನ್ನು ಕಂಡುಕೊಳ್ಳಲು ಕೊಂಚ ಹೆಚ್ಚಿನ ಕಾಲಾವಕಾಶ ಬೇಕು. ಅನ್ನವನ್ನು ಬೇಯಿಸಿ ಎರಡು ದಿನಗಳ ಕಾಲ ಗಾಳಿಗೆ ತೆರೆದಿಡಿ.
  •  ನಿಜವಾದ ಅಕ್ಕಿಯಾದರೆ ಒಂದೇ ದಿನಕ್ಕೆ ಬೂಸು ಬರುತ್ತದೆ. ಎರಡನೆಯ ದಿನಕ್ಕೆ ಬೂಸು, ಶಿಲೀಂಧ್ರ ಎಲ್ಲವೂ ಬರಲೇಬೇಕು. ಆದರೆ ಪ್ಲಾಸ್ಟಿಕ್ ಅಕ್ಕಿಗೆ ಯಾವುದೇ ವಾಸನೆ ಬರುವುದಿಲ್ಲ.
  •  ಕೆಲವರು ನೀಡಿರುವ ಸಲಹೆಯ ಪ್ರಕಾರ ಒಂದು ಮುಷ್ಟಿಯಷ್ಟು ಬಿಸಿ ಅನ್ನವನ್ನು ಕೈಬೆರಳುಗಳಿಂದಲೇ ಉಂಡೆಕಟ್ಟಿ ಸತತವಾಗಿ ಒಂದು ಅಥವಾ ಎರಡು ನಿಮಿಷಗಳ ಕಾಲ ಚೆಂಡಿನ ಆಕೃತಿ ಬರಿಸಿ. ತಣ್ಣಗಾದ ಬಳಿಕ ಈ ಚೆಂಡನ್ನು ಮೇಜಿನ ಮೇಲೆ ಬಡಿಯಿರಿ.

  •  ಒಂದು ವೇಳೆ ಇದು ಪ್ಲಾಸ್ಟಿಕ್ ಅಕ್ಕಿಯಾಗಿದ್ದರೆ ಚೆಂಡಿನಂತೆಯೇ ಪುಟಿಯುತ್ತದೆ, ಒಡೆಯುವುದಿಲ್ಲ. ನಿಜವಾದ ಅಕ್ಕಿಯನ್ನು ಎಷ್ಟೇ ಉಂಡೆಗಟ್ಟಿದರೂ ಕೆಳಗೆ ಬಿದ್ದ ತಕ್ಷಣ ಒಡೆದು ಚೂರುಚೂರಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…