ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.