ಸುದ್ದಿ

ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

95

ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ  ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ

ಹುಣ್ಣಿಮೆಯಂದು ಉಪವಾಸ :  ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.

ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…