ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…