ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.