ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ ಜನರ ಮೇಲೆ ಪ್ರವಾಹ ಪರಿಣಾಮ ಬೀರಿದೆ ಎನ್ನಲಾಗಿದೆ.

ನದಿ ನೀರು ನಿರ್ದಿಷ್ಠ ಮಟ್ಟವನ್ನು ತಲುಪಿದ್ದು, ಒಂದೆರಡು ದಿನಗಳಲ್ಲಿ ಅಪಾಯದ ಮಟ್ಟವನ್ನು ದಾಟಬಹುದು ಎಂದು ಒಳನಾಡಿನ ಜಲಮಾರ್ಗ ಪ್ರಾಧಿಕಾರದ ವಿಭಾಗ ಅಧಿಕಾರಿ ವಿ. ಗಾಂಧಿಯಾ ಅವರು ತಿಳಿಸಿದ್ದಾರೆ.ಡಿಖೋವ್, ಧನ್ಸಿರಿ, ಜಿಯಾ ಭಾರಲಿ, ಪುತಿಮರಿ ಮತ್ತು ಬೆಕಿ ನದಿಗಳು ಕೂಡ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜೋರ್ಹತ್ನ ನಿಮತಿ ಘಾಟ್ನಲ್ಲಿ ನದಿ ಈಗಾಗಲೇ ತುಂಬಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುವಾಹಟಿ ಸಮೀಪದ ದೀಪರ್ ಬಿಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಎರಡು ಮನೆಗಳು ನಾಶವಾಗಿದ್ದು, ಓರ್ವ ವ್ಯಕ್ತಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪ್ರವಾಹದಿಂದಾಗಿ ಜುಲೈ 10 ರಂದು ಸಂಜೆ 5 ಗಂಟೆಯ ಹೊತ್ತಿಗೆ ಒಟ್ಟು 13,267.74 ಹೆಕ್ಟೇರ್ ಬೆಳೆ ಪ್ರದೇಶ ನಾಶವಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ವರದಿ ಮಾಡಿದೆ.

ರಾಜ್ಯದಲ್ಲಿ ಮಳೆ ನಿರಂತರವಾಗಿ ಹೆಚ್ಚಾಗಲಿದ್ದು ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು 24*7 ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸುವಂತೆ ಅಸ್ಸಾಂ ಸಿಎಂ ಸೂಚಿಸಿದ್ದಾರೆ. ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿನ ಔಷಧಿಗಳ ದಾಸ್ತಾನು ನವೀಕರಿಸಲು ಮತ್ತು ವೈದ್ಯರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಆಯುಕ್ತರಿಗೆ ಸಿಎಂ ಸೂಚಿಸಿದ್ದಾರೆ.

ಪ್ರವಾಹ ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೂ ಪರಿಣಾಮ ಬೀರಿದ್ದು, ಬ್ರಹ್ಮಪುತ್ರದಿಂದ ಬರುವ ಪ್ರವಾಹದ ನೀರು ಕಾಜಿರಂಗ ರಾಷ್ಟ್ರೀಯ ಉದ್ಯಾನದ ಕೆಲವು ಭಾಗಗಳನ್ನು ಪ್ರವೇಶಿಸಿದ್ದು, ಪ್ರಾಣಿಗಳು ತಮ್ಮ ಜೀವ ರಕ್ಷಣೆಗಾಗಿ ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಸೂಕ್ತ ಕ್ರಮ ಕೈಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…