ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ ಕರೆದುಕೊಂಡು ಹೋಗುತ್ತಾನೆ.
ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ. ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.
ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.
ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.
ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.
ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.
ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.
ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.
ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.
ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ
ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.
ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.
ವೃಶ ಕಪಿ ಅವತಾರ
ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.
ಜೈ ಶ್ರೀ ರಾಮ್…
ಜೈ ಹನುಮಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…