ಸಿನಿಮಾ

ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

3258

ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…

ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.

ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.

ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.

  1. ನಿಮ್ಮ ದೃಷ್ಟಿಯಲ್ಲಿ ಈಗಿರುವ ಪ್ರಜಾಕಾರಣಿ ಯಾರು? ಮತ್ತು ಯಾಕೆ?

2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?

3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್‌ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?

ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?

4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?

5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?

6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?

7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?

8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?

9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?

ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.

ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್‌ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ

ಮೂಲ

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…