ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.
ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.
ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.
ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…