ಸುದ್ದಿ

ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

252

ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.

ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು  ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…