ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…