ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.