ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.