ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…