News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

253

ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.

ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು  ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.   ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್‌ಪೇಸ್ಟ್…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…