Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

190

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.