Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

221

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…