Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

232

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.